Crop insurance 44.34 ಕೋಟಿ ಬೆಳೆ ವಿಮೆ ಬಿಡುಗಡೆ: ನಿಮಗೆಷ್ಟು ಜಮೆಯಾಗಿದೆ? ಇಲ್ಲೇ ಚೆಕ್ ಮಾಡಿ

Written by Admin

Published on:

Spread the love

Crop insurance : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತಮ್ಮ ಬೆಳೆಗಳಿಗೆ ವಿಮೆ ಪಡೆದಿದ್ದ 27637  ರೈತರಿಗೆ ಒಟ್ಟು44,34,77,748 ವಿಮಾ ಮೊತ್ತವು ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದೆ.

ಬೆಳೆ ವಿಮೆ

ಪ್ರಕೃತಿ ವಿಕೋಪಗಳಿಂದ ತಮ್ಮ ಯಾವುದೇ ಅಧಿಸೂಚಿತ ಬೆಳೆ ವಿಫಲವಾದ ಪಕ್ಷದಲ್ಲಿ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ಒದಗಿಸುವ ಉದ್ದೇಶದಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಶೇ. 50 : 50 ನೆರವಿನ ಈ ಯೋಜನೆಯಡಿ 2023-24 ರಲ್ಲಿ ತಮ್ಮ ಮುಂಗಾರು ಬೆಳೆಗಳಿಗೆ ರಾಷ್ಟ್ರೀಕೃತ  ಬ್ಯಾಂಕ್ ಗಳ ಮೂಲಕ ವಿಮೆ ಪಡೆದಿದ್ದ ಜಿಲ್ಲೆಯ ರೈತರಿಗೆ ಈ ಪರಿಹಾರದ ಮೊತ್ತ  ಬಿಡುಗಡೆಗೊಂಡಿದೆ.

Crop insurance  ಯಾವ ತಾಲೂಕಿನ ರೈತರಿಗೆ ಎಷ್ಟು ಬೆಳೆ ವಿಮೆ ಪರಿಹಾರ ಜಮೆಯಾಗಿದೆ?               

ಜಿಲ್ಲೆಯಲ್ಲಿ ಈ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದ ಭಟ್ಕಳ ತಾಲೂಕಿನ 271 ರೈತರಿಗೆ 1,54,644 ರೂಪಾಯಿ ವಿಮೆ ಹಣ ಜಮೆ ಮಾಡಲಾಗಿದೆ. ದಾಂಡೇಲಿ ತಾಲೂಕಿನ 103 ರೈತರಿಗೆ 4,63,893 ರೂಪಾಯಿ ಹಣ ಜಮೆ ಮಾಡಲಾಗಿದೆ.

ಹಳಿಯಾಳ ತಾಲೂಕಿನ 8883 ರೈತರಿಗೆ 5,35,41,942 ರೂಪಾಯಿ ಹಣ ಜಮೆ ಮಾಡಲಾಗಿದೆ. ಹೊನ್ನಾವರ ತಾಲೂಕಿನ 84 ರೈತರಿಗೆ 36671 ರೂಪಾಯಿ ಜಮೆ ಮಾಡಲಾಗಿದೆ. ಜೋಡಿಯಾ ತಾಲೂಕಿನ 275 ರೈತರಿಗೆ 1,29,795 ರೂಪಾಯಿ ಜಮೆ ಮಾಡಲಾಗಿದೆ. ಕುಮಟಾ ತಾಲೂಕಿನ 57 ರೈತರಿಗೆ 50,408 ರೂಪಾಯಿ ಜಮೆ ಮಾಡಲಾಗಿದೆ. ಮುಂಡಗೋಡ ತಾಲೂಕಿನ 7041 ರೈತರಿಗೆ 20,28,49,480 ರೂಪಾಯಿ ಜಮೆ ಮಾಡಲಾಗಿದೆ. ಸಿದ್ದಾಪೂರ ತಾಲೂಕಿನ 421 ರೈತರಿಗೆ 3,59,997 ರೂಪಾಯಿ ಜಮೆ ಮಾಡಲಾಗಿದೆ. ಶಿರಸಿ ತಾಲೂಕಿನ 421 ರೈತರಿಗೆ 3,59997 ರೂಪಾಯಿ ಜಮೆ ಮಾಡಲಾಗಿದೆ. ಶಿರಸಿತಾಲೂಕಿನ 9123 ರೈತರಿಗೆ 17,72,58,214 ರೂಪಾಯಿ ಜಮೆ ಮಾಡಲಾಗಿದೆ. ಯಲ್ಲಾಪುರ ತಾಲೂಕಿನ 1379 ರೈತರಿಗೆ 86,32,698 ರೂಪಾಯಿ ಸೇರಿದಂತೆ ಒಟ್ಟು 44.34 ಕೋಟಿ ರೂಪಾಯಿ ಮೊತ್ತವನ್ನು ರೈತರ ಖಾತೆಗಳಿಗೆ ಜಮೆ ಮಾಡಲಾಗಿದೆ.

Crop insurance ನಿಮಗೆಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ?

ಬೆಳೆ ವಿಮೆ ಹಣ ನಿಮ್ಮ ಖಾತೆ ಗೆ ಜಮೆಯಾಗಿದೆಯೋ ಇಲ್ಲವೋ ಹಾಗೂ ಎಷ್ಟು ವಿಮೆ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://samrakshane.karnataka.gov.in/      

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. . ಆಗ ಅಲ್ಲಿ ತೆರೆದುಕೊಳ್ಳುವ  ಪೇಜ್ ನಲ್ಲಿನೀವು Summer ಬದಲಾಗಿ Kharif ಆಯ್ಕೆ ಮಾಡಿಕೊಳ್ಳಬೇಕು.  ನಂತರ ಮುಂದೆ/Go ಮೇಲೆ ಕ್ಲಿಕ್ ಮಾಡಬೇಕು.  ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ.  Farmers ಕಾಲಂ ಕೆಳಗಡೆ ಕಾಣುವ Check Status ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ಮೊಬೈಲ್ ನಂಬರ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮೊಬೈಲ್ ನಂಬರ್ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ  Search  ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬೆಳೆ ವಿಮೆ ಹಣ ಜಮೆಯಾಗಿರುವ ಮಾಹಿತಿ ಕಾಣಿಸುತ್ತದೆ.

ಬೆಳೆ ವಿಮೆ ಪರಿಹಾರ

Crop insurance ಬೆಳೆ ವಿಮೆ ಹಣ ಯಾವಾಗ ಜಮೆಯಾಗಲಿದೆ?

ಈ ಯೋಜನೆ ಮೂಲಕ ಪ್ರಾಕೃತಿಕ ವಿಪತ್ತು ಸಂಭವಿಸಿದ ವರ್ಷದಲ್ಲಿ ಕೃಷಿಯನ್ನೇ ನಂಬಿಕೊಂಡಿದ್ದ ರೈತರ ಕೃಷಿ ಆದಾಯ ಸ್ಥಿರವಾಗಿರುವಂತೆ ರೈತರ ಕೃಷಿ ಆದಾಯ ಸ್ಥಿರವಾಗಿರುವಂತೆ ಮಾಡಲು ಈ ಯೋಜನೆಯು ನೆರವಾಗಿದೆ.

ಇದನ್ನೂ ಓದಿ : Village map ಈ ಮ್ಯಾಪ್ ನಲ್ಲಿ ಜಮೀನಿಗೆ ಹೋಗುವ, ಬಂಡಿದಾರಿ, ಕಾಲುದಾರಿ ಚೆಕ್ ಮಾಡಿ 2024                            

ಈ ಯೋಜನೆಯು ಪ್ರಕೃತಿ ವಿಕೋಪಗಳಾದ   ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಸ್ಫೋಟ, ಸಿಡಿಲು, ಬೆಂಕಿ ಅವಘಡಗಳಿಂದ ಉಂಟಾಗುವ ನಷ್ಟವನ್ನು ವೈಯಕ್ತಿಕವಾಗಿ ನಿರ್ಧರಿಸಿ, ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸುವ ಮೂಲಕ ಆರ್ಥಿಕ ಸಂಕಷ್ಟದಿಂದ ರೈತರನ್ನು ಪಾರು ಮಾಡಲಾಗುತ್ತಿದೆ.2023-24ರ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಭತ್ತ, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳನ್ನು ಅಧಿಸೂಚಿತ ಬೆಳೆಗಳನ್ನಾಗಿ ಗುರುತಿಸಿದ್ದು,  ಜಿಲ್ಲೆಯಲ್ಲಿಈ ಬೆಳೆಗಳನ್ನು ಬೆಳೆಯುವ 27637 ರೈತರು ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಬೆಳೆ ವಿಮೆ ಮಾಡಿಸಿದ್ದರು.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯ ರೈತರಿಗೆ 44 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ವಿಮಾ ಮೊತ್ತ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದೆ. 2023-24 ರಲ್ಲಿ ಮುಂಗಾರು ಕೊರತೆಯಿಂದ ಜಿಲ್ಲೆಯ11 ತಾಲೂಕುಗಳು ಬರ ಪೀಡಿತ ಎಂದು ಘೋಷಣೆಯಾಗಿವೆ. ಈ ತಾಲೂಕುಗಳ ರೈತರಿಗೆ ಬೆೆೆಳೆ ವಿಮೆಯ ಹಣ ಸಹಾಯವಾಗಲಿದೆ.

Leave a Comment