Link RTC aadhar card ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಲಿಂಕ್ ಮಾಡಿ ಬರಗಾಲ ಬೆಳೆ ವಿಮೆ ಪರಿಹಾರ ಪಡೆಯಿರಿ 2024

Written by Admin

Published on:

Spread the love

Link RTC aadhar card : ರೈತರು ತಮ್ಮ ಜಮೀನಿನ ಪಹಣಿ (ಆರ್.ಟಿ.ಸಿ) ಗೆ ಆಧಾರ್ ಲಿಂಕ್ ಮಾಡದಿದ್ದರೆ ಸರ್ಕಾರದ ಹಲವಾರು ಸೌಲಭ್ಯಗಳಿಂದ ವಂಚಿತರಾಗುತ್ತಾರೆ? ಹಾಗಾದರೆ ಯಾವ ಯಾವ ಸೌಲಭ್ಯಗಳು ರೈತರಿಗೆ ಸಿಗುವುದಿಲ್ಲ? ಮೊಬೈಲ್ ನಲ್ಲೇ ಆಧಾರ್ ಪಹಣಿ ಲಿಂಕ್ ಮಾಡಬಹುದೇ? ಹೇಗೆ ಲಿಂಕ್ ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Link RTC aadhar card ರೈತರಿಗೆ ಆಧಾರ್ ಪಹಣಿ ಲಿಂಕ್ ಮಾಡದಿದ್ದರೆ ಯಾವ ಸೌಲಭ್ಯಗಳು ಸಿಗುವುದಿಲ್ಲ?

ರೈತರು ತಮ್ಮ ಜಮೀನಿನ ಪಹಣಿ ಗೆ ಆಧಾರ್ ಲಿಂಕ್ ಮಾಡಿಸದಿದ್ದಲ್ಲಿ ಅಂತಹ ರೈತರಿಗೆ ಸರ್ಕಾರ ಸೌಲಭ್ಯಗಳಾದ ಬೆಳೆ ಹಾನಿ ಪರಿಹಾರ, ಬರಗಾಲ ಪರಿಹಾರ, ಬೆಳೆ ವಿಮೆ ಪರಿಹಾರ, ಬ್ಯಾಂಕ್ ಸಾಲ ಸೇರಿದಂತೆ ಇನ್ನಿತರ ಸೌಲಭ್ಯಗಳಿಂದ ವಂಚಿತರಾಗುತ್ತಾರೆ.

ಆಧಾರ್ ಜೋಡಣೆಯಿಂದಜ ಪೌತಿ, ವಾರಸಾ ಹಾಗೂ ಉಪ ನೋಂದಣಿಗಳ ಕಚೇರಿಯಲ್ಲಿ ನೋಂದಣಿ ಕಾರ್ಯಗಳಲ್ಲಿ ಆಗುವ ಅಕ್ರಮಗಳನ್ನು ತಡೆಗಟ್ಟಬಹುದು. ಕಾರಣ ಎಲ್ಲಾ ರೈತ ಬಾಂಧವರು ತಮ್ಮ ತಮ್ಮ ಪಹಣಿ ಪತ್ರಿಕೆಗಳಿಗೆ ಸಂಬಂಧಪಟ್ಟ  ಗ್ರಾಮ ಆಡಳಿತ ಅಧಿಕಾರಿಗಳಿಗೆ ಭೇಟಿ ನೀಡಿ ಆಧಾರ್ ಲಿಂಕ್ ಮಾಡಿಕೊಳ್ಳಬಹುದು.

Link RTC aadhar card ಮೊಬೈಲ್ ನಲ್ಲೇ ಪಹಣಿ ಆಧಾರ್ ಲಿಂಕ್ ಮಾಡುವುದು ಹೇಗೆ?

ರೈತರು ಮನೆಯಲ್ಲಿಯೇ ಕುಳಿತು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ  ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಈ

https://landrecords.karnataka.gov.in/service4

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು ನಿಮ್ಮ ಆಧಾರ್ ಕಾರ್ಡ್ ಗೆ ಜೋಡಣೆ ಆಗಿರುವ ಮೊಬೈಲ್ ನಂಬರ್ ಹಾಕಬೇಕು. ನಂತರ ನಿಮ್ಮ ಬಳಿಯಿರುವ ಮೊಬೈಲ್ ನಂಬಿಗೆ ಓಟಿಪಿ ಬರುತ್ತದೆ.  ಆಗ ನೀವು ನಿಮ್ಮ ಮೊಬೈಲಿಗೆ ಬಂದ ಓಟಿಪಿಯನ್ನು ಅಲ್ಲಿ ಬರೆದು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಭೂಮಿ ನಾಗರಿಕ ಸೇವೆಗಳು  ಪೇಜ್ ತೆರೆದುಕೊಳ್ಳುತ್ತದೆ.

pahani adharcard link

ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಬೇಕು. ನಂತರ ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು ನಮೂದಿಸಬೇಕು. ನಂತರ ನಾನು ಇಲ್ಲಿ ಸ್ವಯಂ ಪ್ರೇರಣೆಯಿಂದ ಆಧಾರ್ ಗಾಗಿ ನನ್ನ ಒಪ್ಪಿಗೆಯನ್ನು ನೀಡುತ್ತೇದೆ  ಬಾಕ್ಸ್ ಆಯ್ಕೆ ಮಾಡಿ ಅಲ್ಲಿ ಕಾಣುವ Verify ಮೇಲೆ ಕ್ಲಿಕ್ ಮಾಡಬೇಕು.  ಆಗ ನಿಮಗೆ ಆಧಾರ್ ಅನ್ನು ಯಶಸ್ವಿಯಾಗಿ ಪರಿಶೀಲಿಸಲಾಗಿದೆ ಎಂಬ ಸಂದೇಶ ಕಾಣಿಸುತ್ತದೆ.ಅಲ್ಲಿ ಒಕೆ ಮೇಲೆ ಕ್ಲಿಕ್ ಮಾಡಿದ ನಂತರ ಆಧಾರ್ ಪರಿಶೀಲನೆಯನ್ನು ಬಳಸಿಕೊಂಡು ಅರ್ಜಿದಾರರ ವಿವರಗಳನ್ನು ಭರ್ತಿ ಮಾಡಿ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.

ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ನನ್ನ ಆಧಾರ್ ಮಾಹಿತಿ ಹಾಗೂ ಇತರ ಮಾಹಿತಿಗಳನ್ನು ಯುಐಡಿಎಐನೊಂದಿಗೆ ಇಕೆವೈಸಿ ದೃಢೀಕರಣಕ್ಕೆ ಬಾಕ್ಸ್ ಆಯ್ಕೆಮಾಡಿಕೊಂಡು ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಓಟಿಪಿ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು.  ಆಗ ನಿಮ್ಮಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.

Link RTC aadhar card ಏನೇನು ಮಾಹಿತಿ ಕಾಣಿಸುತ್ತದೆ?

ಅಲ್ಲಿ ನಿಮ್ಮ ಹೆಸರು, ತಂದೆಯ ಹೆಸರು, ಊರು, ತಾಲೂಕು ಹಾಗೂ ಜಿಲ್ಲೆ ಕಾಣಿಸುತ್ತದೆ.ಇದರೊಂದಿಗೆ ನಿಮ್ಮ ಊರು ವಿಳಾಸ ಹಾಗೂ  ಫೋಟೋ ಸಹ ಕಾಣಿಸುತ್ತದೆ.

ಇದನ್ನೂ ಓದಿ Ekyc pending list ಇಕೆವೈಸಿ ಆಗದೆ ಇರುವ ರೈತರ ಪಟ್ಟಿ ಬಿಡುಗಡೆ- ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ 2024

ಅಲ್ಲಿ ಕಾಣುವ ಲಿಂಕ್ ಆಧಾರ್ ಮೇಲೆ ಕ್ಲಿಕ್ ಮಾಡಬೇಕು ಆಗ ನಿಮ್ಮ ಆಧಾರ್ ಕಾರ್ಡಿಗೆ ಯಾವ ಯಾವ ಪಹಣಿ ಲಿಂಕ್ ಆಗಿದೆ ಆ ಸರ್ವೆ ನಂಬರ್ ಗಳು ಕಾಣಿಸುತ್ತವೆ.ಒಂದು ವೇಳೆ ಪಹಣಿ ಲಿಂಕ್ ಆಗದಿದ್ದರೆ ಭೂಮಿ ಲಿಂಕ್ ಡಿಟೇಲ್ ನಲ್ಲಿ ಕೇಳಲಾದ ಮಾಹಿತಿಗಳನ್ನು ಭರ್ತಿ ಮಾಡಿ ಸರ್ವೆ ನಂಬರ್ ನಮೂದಿಸಿ ಲಿಂಕ್ ಮಾಡಬೇಕು.

ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಪಹಣಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಬಹುದು. ಹೌದು,

ಆಧಾರ್ ಪಹಣಿ ಜೋಡಣೆ ಪ್ರಕ್ರಿಯೆ ಚಾಲನೆ

ನಕಲಿ ಭೂ ದಾಖಲೆಗಳ ಹಾವಳಿ ತಡೆ ಸೇರಿದಂತೆ ಇನ್ನಿತರ ಕ್ರಮಕ್ಕಾಗಿ ರಾಜ್ಯದ ಎಲ್ಲಾ ಪಹಣಿಗಳಿಗೆ ಅದರ ಮಾಲಿಕರ ಆಧಾರ್ ಸಂಖ್ಯೆ ಜೋಡಣೆ ಮಾಡು ಪ್ರಕ್ರಿಯೆ ಚಾಲನೆ ನೀಡಲಾಗಿದೆ. ಸದ್ಯ ರಾಜ್ಯದಲ್ಲಿ 2.30 ಕೋಟಿ ಪಹಣಿ ಹಾಗೂ 3.90 ಕೋಟಿ ಪಹಣಿ ಮಾಲಿಕರಿದ್ದು, ಅವರೆಲ್ಲರ ಪಹಣಿಯೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಲಾಗುವುದು.

Leave a Comment