Crop insurance date ಯಾವ ಬೆಳೆಗೆ ವಿಮೆ ಮಾಡಿಸಲು ಎಷ್ಟು ದಿನ ಬಾಕಿ ಇದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

Written by Admin

Published on:

Spread the love

Crop insurance date : ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಯಾವ ಬೆಳೆಗೆ ವಿಮೆ ಮಾಡಿಸಲು ಇನ್ನೂ ಎಷ್ಟು ದಿನ ಬಾಕಿ ಇದೆ ಎಂಬುದನ್ನು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಪ್ರಸಕ್ತ ಸಾಲಿನ 2024-25ನೇ ಸಾಲಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ವಿವಿಧ ಬೆಳೆಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಮುಂಗಾರು ಹಂಗಾಮಿಗೆ ವಿವಿಧ ಜಿಲ್ಲೆಯಲ್ಲಿ ಬೇರೆ ಬೇರೆ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ.

Crop insurance date ಯಾವ ಯಾವ ಬೆಳೆಗೆ ವಿಮೆ ಮಾಡಿಸಲು ಇನ್ನೂ ಸಮಯಾವಕಾಶವಿದೆ? ಇಲ್ಲೇ ಚೆಕ್ ಮಾಡಿ

ರೈತರು ಪ್ರಸಕ್ತಸಾಲಿನಲ್ಲಿ ಮುಂಗಾರು ಹಂಗಾಮಿಗೆ ಯಾವ ಯಾವ ಬೆಳೆಗೆ ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು ಎಂಬುದನ್ನು ಚೆಕ್ ಮಾಡಲು ಈ

https://samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮಗೆ Premium Calculator, Crop you can insure, check status, Know your Insurance co. Find Gram panchayat,  Crop Insurance Detail on survey No and View cut of Details ಮೇಲೆ  ಕಾಣಿಸುತ್ತವೆ. ಅಲ್ಲಿ ನೀವು  View cut of Details ಮೇಲೆ ಕ್ಲಿಕ್ ಮಾಡಬೇಕು. ಅಥವಾ

https://samrakshane.karnataka.gov.in/PublicView/FindCutOff.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ಆಗ ನಿಮಗೆ ನಿಮ್ಮ ಜಿಲ್ಲೆಯಿಂದ ಯಾವ ಯಾವ ಬೆಳೆಗಳಿಗೆ ಯಾವುದು ಕೊನೆಯ ದಿನಾಂಕವಿದೆ ಎಂಬ ಮಾಹಿತಿ ಕಾಣಿಸುತ್ತದೆ.

Crop insurance date ಯಾವ ಬೆಳೆಗೆ ವಿಮೆ ಮಾಡಿಸಲು ಯಾವುದು ಕೊನೆಯ ದಿನವಾಗಿದೆ?

ಉದ್ದು, ಹೆಸರು ಬೆಳೆಗೆ ಜುಲೈ 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ನೀರಾವರಿ ಈರುಳ್ಳಿ ಹಾಗೂ ಕೆಂಪು ಮೆಣಸಿನಕಾಯಿ ಮತ್ತು ಮಳೆಯಾಶ್ರಿತ ಹತ್ತಿ ಬೆಳೆಗೆ ಆಗಸ್ಟ್ 16 ಕೊನೆಯ ದಿನವಾಗಿದೆ. ನೀರಾವರಿ ಶೇಂಗಾ ಹಾಗೂ ಇನ್ನುಳಿದ ಹೋಬಳಿ ಮಟ್ಟದ ಬೆಳೆಗಳಿಗೆ ಜುಲೈ 31 ಕೊನೆಯ ದಿನವಾಗಿದೆ.

Check crop insurance

ಭತ್ತ (ನೀರಾವರಿ), ಮುಸುಕಿನ ಜೋಳ (ನೀರಾವರಿ ಮತ್ತು ಮಳೆಯಾಶ್ರಿತ), ತೊಗರಿ (ನೀರಾವರಿ ಮತ್ತು ಮಳೆಯಾಶ್ರಿತ), ಉದ್ದು (ಮಳೆಯಾಶ್ರಿತ), ನವಣೆ (ಮಳೆಯಾಶ್ರಿತ) ತೊಗರಿ (ನೀರಾವರಿ ಮತ್ತು ಮಳೆಯಾಶ್ರಿತ), ಹತ್ತಿ (ನೀರಾವರಿ ಮತ್ತು ಮಳೆಯಾಶ್ರಿತ) ಹಾಗೂ ಸೋಯಾ ಅವರೆ (ಮಳೆಯಾಶ್ರಿತ) ಬೆಳೆಗಳಿಗೆ  ರೈತರು  ನೋಂದಣಿ ಮಾಡಿಕೊಳ್ಳಳು ಜುಲೈ 31 ಕೊನೆಯ ದಿನವಾಗಿದೆ.

ಇದನ್ನೂ ಓದಿBaragala parihara farmers list ಈ ಪಟ್ಟಿಯಲ್ಲಿರುವ ರೈತರಿಗೆ ಬರ ಪರಿಹಾರ ಜಮೆ- ನಿಮಗೆಷ್ಟು ಜಮೆ ಇಲ್ಲೇ ಚೆಕ್ ಮಾಡಿ

ಹೆಸರು (ಮಳೆಯಾಶ್ರಿತ) ಬೆಳೆಗೆ ನೋಂದಣಿ ಮಾಡಿಕೊಳ್ಳಲು ಜುಲೈ 15 ಕೊನೆಯ ದಿನವಾಗಿದೆ. ಸೂರ್ಯಕಾಂತಿ (ನೀರಾವರಿ ಮತ್ತು ಮಳೆಯಾಶ್ರಿತ ಬೆಳೆಗೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್16 ಕೊನೆಯ ದಿನವಾಗಿದೆ

ರೈತರು ನೋಂದಣಿಗಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ಹೊಂದಿದ ಎಫ್ಐಡಿ ಸಂಖ್ಯೆಯನ್ನು ಹಾಗೂ ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಜೊತೆಗೆ ಎನ್.ಪಿ.ಸಿ.ಆಯ್ ಸೀಡಿಂಗ್ ಮಾಡಿಸಿರಬೇಕು. ಆಧಾರ್ ಕಾರ್ಡ್ ಝರಾಕ್ಸ್ ಪ್ರತಿ, ಪಹಣಿ ಪತ್ರಿಕೆ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿ ದಾಖಲೆಗಳೊಂದಿಗೆ ಹತ್ತಿರದ ಬ್ಯಾಂಕ್ ಶಾಖೆಗಳಲ್ಲಿ ಅಥವಾ ಗ್ರಾಮ ಒನ್ ಕೇಂದ್ರ ಅಥವಾ ಸಿ.ಎಸ್.ಸಿ ಕೇಂದ್ರದಲ್ಲಿ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.

Crop insurance date  ರೈತರು ಬೆಳೆ ವಿಮೆ ಎಲ್ಲಿ ಮಾಡಿಸಬಹುದು?

ಬೆಳೆ ವಿಮೆ ಮಾಡಿಸಲು ಇನ್ನೂ ಕಾಲವಕಾಶವಿದೆ.ನೀವು ಬೆಳೆವಿಮೆ ಮಾಡಿಸಲು ಕೊನೆಯ ದಿನಾಂಕದವರೆಗೆ ಕಾಯದೆ ಕೂಡಲೇ ಬೆಳೆ ವಿಮೆ ಮಾಡಿಸಬಹುದು.  ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ, ಹತ್ತಿರದ ಬ್ಯಾಂಕಿನಲ್ಲಿ ಅಥವಾ ಸಿ.ಎಸ್.ಸಿ ಕೇಂದ್ರಗಳಲ್ಲಿ ಬೆಳೆ ವಿಮೆ ಮಾಡಿಸಬಹುದು.

Leave a Comment