Crop insurance date announced ಈ ದಿನಾಂಕದೊಳಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ 2025

Written by Admin

Published on:

Spread the love

Crop insurance date announced : ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಬೆಳೆವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದೆ. ಹಾಗಾದರೆ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು? ಬೆಳೆ ವಿಮೆ ಮಾಡಿಸಲುಕೊನೆಯ ದಿನಾಂಕ ಯಾವುದು ಹಾಗೂ ಯಾವ ಬೆಳೆಗೆ ಎಷ್ಟು ವಿಮೆ ಹಣ ಪಾವತಿಸಬೇಕು ಎಂಬುದರ ಮಾಹಿತಿ ಇಲ್ಲಿದೆ.

2025-2026 ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯಲ್ಲಿ ಬೆಳೆದಿರುವ ಕೆಳಕಂಡ ಬೆಳೆಗಳಿಗೆ ರೈತರು ತಮ್ಮ ಹತ್ತಿರದ ಗ್ರಾಮ್-ಒನ್, ಸಿ.ಎಸ್.ಸಿ ಕೇಂದ್ರ, ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್‌ಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕೆಂದು ಕಲಬುರಗಿ ಜಂಟಿ ನಿರ್ದೇಶಕರಾದ ಸಮದ್ ಪಟೇಲ್ ಅವರು ತಿಳಿಸಿದ್ದಾರೆ.

ಬೆಳೆವಾರು ರೈತರು ಪಾವತಿಸಬೇಕಾದ ವಂತಿಕೆ ವಿವರ ಇಂತಿದೆ. ಹೆಸರು (ಮಳೆಆಶ್ರಿತ) ಪ್ರತಿ ಎಕರೆಗೆ 269.13 ರೂ. ವಂತಿಕೆ,  ಉದ್ದು (ಮಳೆಆಶ್ರಿತ) ಪ್ರತಿ ಎಕರೆಗೆ ರೂ. 265.08 ವಂತಿಕೆ, ತೊಗರಿ (ಮಳೆಆಶ್ರಿತ) ಪ್ರತಿ ಎಕರೆಗೆ 388.51 ರೂ. ವಂತಿಕೆ, ತೊಗರಿ (ನೀರಾವರಿ) ಪ್ರತಿ ಎಕರೆಗೆ ರೂ. 406.72 ವಂತಿಕೆ, ಹತ್ತಿ (ಮಳೆಆಶ್ರಿತ) ಪ್ರತಿ ಎಕರೆಗೆ ರೂ. 865.75 ವಂತಿಕೆ, ಹತ್ತಿ (ನೀರಾವರಿ) ಪ್ರತಿ ಎಕರೆಗೆ ರೂ. 1492.33 ವಂತಿಕೆ ಹಾಗೂ ಸೂಯಾಅವರೆ (ಮಳೆಆಶ್ರಿತ) ಪ್ರತಿ ಎಕರೆಗೆ ರೂ. 331.85 ವಂತಿಕೆಯನ್ನು ರೈತರು ಪಾವತಿಸಬೇಕು. ರೈತರು ನೋಂದಣಿ ಮಾಡಿಕೊಳ್ಳಲು 2025ರ ಜುಲೈ 31 ಕೊನೆಯ ದಿನವಾಗಿದೆ.

ಇದನ್ನೂಓದಿ Goods vehicle purchase subsidies ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

ಕಲಬುರಗಿ ಜಿಲ್ಲೆಯಲ್ಲಿ ಮುಂಗಾರು ಬಿತ್ತನೆ ಭರದಿಂದ ಸಾಗಿದ್ದು, ಅತೀವೃಷ್ಟಿ, ಅನಾವೃಷ್ಟಿ, ಅಕಾಲೀಕ ಮಳೆಯಂತಹ ಪ್ರಕೃತಿ ವಿಕೋಪಗಳು ಹಾಗೂ ಯಾವುದೇ ಹಂತದಲ್ಲಿ ಬೆಳೆನಾಶವಾಗಬಹುದು. ಆದ್ದರಿಂದ ರೈತಭಾಂದವರು ಬಿತ್ತನೆ ಕಾರ್ಯಕೈಗೊಳ್ಳುವುದಷ್ಟೇ ಅಲ್ಲದೆ, ಬಿತ್ತಿದ ಬೆಳೆಯ ಕ್ಷೇತ್ರವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ವ್ಯಾಪ್ತಿಗೆ ನೊಂದಾಯಿಸುವುದು ಸಹ ಪ್ರಮುಖವಾಗಿದೆ.

ಕಳೆದ 3 ಮೂರು ವರ್ಷಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ 561082 ಲಕ್ಷ ರೈತರು ಬೆಳೆವಿಮೆ ನೋಂದಣಿ ಮಾಡಿದ್ದು, 59.39 ಕೋಟಿ ರೈತರ ವಂತಿಕೆ ಪಾವತಿ ಮಾಡಿರುತ್ತಾರೆ ಹಾಗೂ 954.61 ಕೋಟಿ ಪರಿಹಾರಧನವನ್ನು ರೈತರ ಖಾತೆಗೆ ಪಾವತಿಸಲಾಗಿದೆ. ಕಳೆದ ಮೂರು ವರ್ಷದ ಮಾಹಿತಿ ನೊಡಿದಾಗ ರೈತರಿಗೆ ಬೆಳೆವಿಮೆ ಯೋಜನೆ ಬಹಳ ಅನುಕೂಲಕರವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಶೇ 90 ರಷ್ಟು ಪ್ರದೇಶ ಮಳೆಯಾಶ್ರಿತವಾಗಿರುವುದರಿಂದ ಅತೀವೃಷ್ಟಿ ಹಾಗೂ ಅನಾವೃಷ್ಟಿಗೆ ಸತತವಾಗಿ ಬೆಳೆಗಳು ತುತ್ತಾಗಿರುತ್ತವೆ ಎಂದು ಅವರು ತಿಳಿಸಿದ್ದಾರೆ.

Crop insurance date announced  ಇಂದಿನಿಂದ 6 ದಿನ ರಾಜ್ಯದಲ್ಲಿ ಭಾರಿ ಮಳೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜೂನ್ 17 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಉತ್ತರ ಕನ್ನಡ ಉಡುಪಿ, ಶಿವಮೊಗ್ಗ,  ಕೊಡಗು, ಬೆಳಗಾವಿ, ಚಿಕ್ಕಮಗಳೂರು  ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಅದೇ ರೀತಿ ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ  ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದು ಸಮುದ್ರ ಮಟ್ಟದಿಂದ 5.8 ಕಿ. ಮೀ ಎತ್ತರದವರೆಗೆ ಹಬ್ಬಿದೆ.

Crop insurance date announced  ಬೆಂಗಳೂರಿನಲ್ಲಿ ಮಳೆ

ಬೆಂಗಳೂರು ನಗರದಲ್ಲಿ ಜೂನ್ 15 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಮಳೆ ಹೆಚ್ಚಾಗುತ್ತಿರುವುದರಿಂದ ನದಿ ತೀರದ ಮತ್ತು ಗುಡ್ಡಗಾಡು ಪ್ರದೇಶದ ಜನರು ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚನೆ ನೀಡಿದೆ. ಮಳೆಗಾಲದಲ್ಲಿ ಪ್ರವಾಹ ಮತ್ತು ಭೂ ಕುಸಿತದಂತಹ ಅಪಾಯಗಳು ಸಂಭವಿಸಬಹುದು. ಆದ್ದರಿಂದ ಜನರು ಸುರಕ್ಷಿತವಾಗಿರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Comment