crop insurance last date ಯಾವ ಬೆಳೆಗೆ ಯಾವ ದಿನಾಂಕದೊಳಗೆ ಬೆಳೆ ವಿಮೆ ಮಾಡಿಸಬೇಕು? ಮೊಬೈಲ್ ನಲ್ಲೇ ಚೆಕ್ ಮಾಡಿ 2024

Written by Admin

Published on:

Spread the love

crop insurance last date : ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಯಾವ ಬೆಳೆಗೆ ಯಾವ ದಿನಾಂಕದೊಳಗೆ ಬೆಳೆ ವಿಮೆ ಮಾಡಿಸಬೇಕೆಂಬುದನ್ನು ಈಗ ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಲು ಈಗ ಕೊನೆಯ ದಿನಾಂಕ ಯಾವುದು? ಯಾವ ದಿನಾಂಕದೊಳಗೆ ಬೆಳೆ ವಿಮೆ ಮಾಡಿಸಬೇಕು? ನಿಮ್ಮ ಊರಿನಿಂದ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದನ್ನು ಚೆಕ್ ಮಾಡಲು ಎಲ್ಲಿಯೂ ಹೋಗಬೇಕಿಲ್ಲ. ರೈತರಿಗೆ ಮೊಬೈಲ್ ಕುರಿತು ಸ್ವಲ್ಪ ಮಾಹಿತಿ ಇದ್ದರೆ ಸಾಕು, ಮನೆಯಲ್ಲಿಯೇ ಕುಳಿತು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಕ್ಷೀಪ್ತ ಮಾಹಿತಿ.

crop insurance last date ನಿಮ್ಮ ಜಿಲ್ಲೆಗೆ ಬೆಳೆ ವಿಮೆ ಮಾಡಿಸಲು ಯಾವ್ಯಾವ ಬೆಳೆಗಳಿಗೆ ಕೊನೆಯ ದಿನಾಂಕಗಳು ಯಾವುವು? ಹೀಗೆ ಚೆಕ್ ಮಾಡಿ

ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕವನ್ನು ಚೆಕ್ ಮಾಡಲು ಈ

https://samrakshanereports.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ Farmers ಕೆಳಗಡೆ ಇರುವ  View Cut of Dates ಮೇಲೆ ಕ್ಲಿಕ್ ಮಾಡಬೇಕು.  ಇಲ್ಲಿ ನೀವು ನಿಮ್ಮ  ಜಿಲ್ಲೆಆಯ್ಕೆ ಮಾಡಿಕೊಳ್ಳಬೇಕು. ಆಗ ನಿಮ್ಮ ಜಿಲ್ಲೆಯಲ್ಲಿ ಯಾವ್ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದರ ಪಟ್ಟಿ ಕಾಣಿಸುತ್ತದೆ. ಇದರೊಂದಗೆ ಯಾವ ಬೆಳೆಗೆ ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು ಹಾಗೂ ವಿಮೆ ಮಾಡಿಸಲು ಇನ್ನೂ ಎಷ್ಟುದಿನ ಉಳಿದಿದೆ ಎಂಬುದೆಲ್ಲಾ ಮಾಹಿತಿ ಕಾಣಿಸುತ್ತದೆ.

ಉದಾಹರಣೆಗೆ ನೀವು ಕಲಬುರಗಿ ಜಿಲ್ಲೆಯವರಾಗಿದ್ದರು

ಸೋಯಾ ಅವರೆ ಹಾಗೂ ಎಳ್ಳು ಬೆಳೆಗೆ ವಿಮೆ ಮಾಡಿಸಲು ಜುಲೈ 31 ಕೊನೆಯ ದಿನವಾಗಿದೆ.  ನೆಲಗಡಲೆ (ಶೇಂಗಾ), ಹೆಸರು, ತೊಗರಿ, ಹೆಸರು, ಉದ್ದು, ಜೋಳ, ಸಜ್ಜೆ, ಮುಸುಕಿನ ಜೋಳ, ಹಸಿ ಮೆಣಸಿನ ಕಾಯಿ, ಪರಂಗಿ, ದ್ರಾಕ್ಷಿ, ಹತ್ತಿ, ಅರಿಶಿಣ ಬೆಳೆಗೆ ವಿಮೆ ಮಾಡಿಸಲು ಜುಲೈ 31 ಕೊನೆಯ ದಿನವಾಗಿದೆ.

crop insurance last date ರೈತರೇಕೆ ಬೆಳೆ ವಿಮೆ ಮಾಡಿಸಬೇಕು?

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ರೈತರ ಬೆಳೆ ಪ್ರಾಕೃತಿಕ ವಿಕೋಪದಿಂದಾಗಿ ಅಂದರೆ ಬರಗಾಲ, ಅತೀವೃಷ್ಟಿ, ಅನಾವೃಷ್ಟಿ, ಗುಡುಗು ಸಿಡಿಲು, ಭೂ ಕುಸಿತ, ಬಿರುಗಾಳಿ ಸೇರಿದಂತೆ ಇನ್ನಿತರ ಪ್ರಾಕೃತಿಕ ವಿಕೋಪದಿಂದಾಗಿ ಬೆಳೆ ಹಾನಿಯಾದರೆ ವಿಮೆ ಮಾಡಿಸಿದ ರೈತರಿಗೆ ಆರ್ಥಿಕ ಸಹಾಯ ಸಿಗಲಿದೆ. ಹೌದು, ರೈತರು  ಕಟ್ಟುವ ಬೆಳೆ ವಿಮೆ ತುಂಬಾ ಕಡಿಮೆ ಇರುತ್ತದೆ. ಹಾಗಾಗಿ ರೈತರು ಬೆಳೆ ವಿಮೆ ಮಾಡಿಸಬಹುದು. ಆಕಸ್ಮಾತ್ ನಿಮ್ಮ ಬೆಳೆ ಹಾನಿಯಾದರೆ ನಿಮಗೆ ವಿಮೆ ಹಣ ಸಿಗುತ್ತದೆ.

crop insurance last date ಬೆಳೆ ಹಾನಿಯಾದಾಗ ರೈತರೇನು ಮಾಡಬೇಕು?

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿದ ರೈತರು ತಮ್ಮ ಬೆಳೆ ಹಾನಿಯಾದರೆ  72 ಗಂಟೆಯೊಳಗೆ ವಿಮಾ ಕಂಪನಿಯ ಸಿಬ್ಬಂದಿಗಳಿಗೆ ತಿಳಿಸಬೇಕಾಗುತ್ತದೆ. ಆಗ ವಿಮಾ ಕಂಪನಿಯ ಸಿಬ್ಬಂದಿಗಳು ನಿಮ್ಮ ಜಮೀನಿಗೆ ಬಂದು ಹಾನಿಯಾದ ಬೆಳೆಯನ್ನು ಪರಿಶೀಲನೆ ಮಾಡುತ್ತಾರೆ. ನಂತರ ವಿಮಾ ಕಂಪನಿಗೆ ವರದಿ ಸಲ್ಲಿಸುತ್ತಾರೆ. ನಂತರ ನಿಮಗೆ ಬೆಳೆ ವಿಮೆ ಹಣ ಜಮಯಾಗುತ್ತದೆ.

ಇದನ್ನೂ ಓದಿ Pm kisan scheme ಇನ್ನೂ ಮುಂದೆ ಪಿಎಂ ಕಿಸಾನ್ ಹಣ ಈ ರೈತರಿಗಷ್ಟೆ ಜಮೆ- ನಿಮ್ಮ ಹೆಸರು ಚೆಕ್ ಮಾಡಿ 2024

ಬೆಳೆ ವಿಮೆ ಮಾಡಿಸುವಾಗ ರೈತರು ಯಾವ ವಿಮಾ ಕಂಪನಿಗೆ ಬೆಳೆ ವಿಮೆ ಕಟ್ಟುತ್ತಾರೆಂಬುದನ್ನು ತಿಳಿದುಕೊಳ್ಳಬೇಕು. ಏಕೆಂದರೆ ಪ್ರತಿಯೊಂದು ಜಿಲ್ಲೆಗೆ ಬೇರೆ ಬೇರೆ ವಿಮಾ ಕಂಪನಿಗಳನ್ನು ನಿಯೋಜಿಸಲಾಗಿರುತ್ತದೆ.  ಉದಾಹರಣೆಗೆ ಕಲಬುರಗಿ ಜಿಲ್ಲೆಗೆ  ಯೂನಿವರ್ಸಲ್ ಸ್ಯಾಂಪೋ, ಹಾವೇರಿ ಜಿಲ್ಲೆಗೆ ರಿಲಯನ್ಸ್ ಜನರಲ್ ಇನ್ಸುರೆನ್ಸ್ ಹಾೂಗ ಗದಗ, ಕೋಲಾರ ಜಿಲ್ಲೆಗಳಿಗೆ ಬಜಾಜ್ ಅಲಾಯನ್ಸ್ ಕಂಪನಿಗಳನ್ನು ನಿಯೋಜಿಸಲಾಗಿರುತ್ತದೆ. ಇದೇ ರೀತಿ ಬೇರೆ ಬೇರೆ ಜಿಲ್ಲೆಗಳಿಗೆ ವಿವಿಧ ವಿಮಾ ಕಂಪನಿಗಳನ್ನು ನಿಯೋಜಿಸಿರುತ್ತಾರೆ.

Leave a Comment