Crop insurance last date check ಯಾವ ಬೆಳೆಗೆ ವಿಮೆ ಮಾಡಿಸಲು 5 ದಿನ ಕಾಲಾವಕಾಶವಿದೆ? ಇಲ್ಲೇ ಚೆಕ್ ಮಾಡಿ

Written by Admin

Updated on:

Spread the love

Crop insurance last date check ಪ್ರಸಕ್ತ ಸಾಲಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬಹುವಾರ್ಷಿಕ  ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ ಹಾಗೂ ಮಾವು ಬೆಳೆಗಳ ಬೆಳೆ ವಿಮೆ ನೋಂದಣಿಗೆ ಅವಧಿಯನ್ನು ಬೆಳೆ ಸಾಲ ಪಡೆದ ರೈತರಿಗೆ ಮಾತ್ರ ಆಗಸ್ಟ್ 25 ರವರೆಗೆವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Crop insurance last date check ನಿಮ್ಮ ಜಿಲ್ಲೆಗೆ ಯಾವ ಯಾವ ಬೆಳೆಗೆ ವಿಮೆ ಮಾಡಿಸಲು ಅಂತಿಮ ದಿನವಿದೆ?

ನಿಮ್ಮ ಜಿಲ್ಲೆಗೆ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಲು ಅಂತಿಮ ದಿನವಿದೆ ಎಂದು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಇದಕ್ಕಾಗಿ ರೈತರು ಕೆಳಗೆ ನೀಡಲಾದ ಕೆಲವು ಮಾಹಿತಿಗಳ ಪ್ರಕಾರ ಅತೀ ಸುಲಭವಾಗಿ ಚೆಕ್ ಮಾಡಬಹುದು.

ರೈತರು ಪ್ರಸಕ್ತಸಾಲಿನಲ್ಲಿ ಮುಂಗಾರು ಹಂಗಾಮಿಗೆ ಯಾವ ಯಾವ ಬೆಳೆಗೆ ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು ಎಂಬುದನ್ನು ಚೆಕ್ ಮಾಡಲು ಈ

https://samrakshane.karnataka.gov.in/                       

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮಗೆ Premium Calculator, Crop you can insure, check status, Know your Insurance co. Find Gram panchayat,  Crop Insurance Detail on survey No and View cut of Details ಮೇಲೆ  ಕಾಣಿಸುತ್ತವೆ. ಅಲ್ಲಿ ನೀವು  View cut of Details ಮೇಲೆ ಕ್ಲಿಕ್ ಮಾಡಬೇಕು. ಅಥವಾ

https://samrakshane.karnataka.gov.in/PublicView/FindCutOff.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ಆಗ ನಿಮಗೆ ನಿಮ್ಮ ಜಿಲ್ಲೆಯಿಂದ ಯಾವ ಯಾವ ಬೆಳೆಗಳಿಗೆ ಯಾವುದು ಕೊನೆಯ ದಿನಾಂಕವಿದೆ ಎಂಬ ಮಾಹಿತಿ ಕಾಣಿಸುತ್ತದೆ.

Crop insurance last date

ಬೆಳೆ ವಿಮೆ ಕುರಿತು ಸಂಪೂರ್ಣ ಮಾಹಿತಿ ಪಡೆಯಲು ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.

Crop insurance last date check ಬೆಳೆ ವಿಮೆ ಮಾಡಿಸಿದ ನಂತರ ರೈತರೇನು ಮಾಡಬೇಕು?

ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ನಂತರ ರೈತರು ಬೆಳೆ ಸಮೀಕ್ಷೆ ಮಾಡಿಸಬೇಕು.  ಬೆಳೆ ಸಮೀಕ್ಷೆ ಮಾಡಿಸುವುದರೊಂದಿಗೆ ಫ್ರೂಟ್ಸ್ ಐಡಿಹೊಂದಿರಬೇಕು. ಇದರೊಂದಿಗೆ ತಮ್ಮ ಬ್ಯಾಂಕ್ ಶಾಖೆಯಲ್ಲಿ ಆಧಾರ್ ಸೀಡ್ ಮಾಡಿಸಿಕೊಂಡಿರಬೇಕು.

ಇದನ್ನೂ ಓದಿ Why pm kisan not credited ಪಿಎಂ ಕಿಸಾನ್ ಹಣ ಜಮೆಯಾಗಲು ಕೂಡಲೇ ಈ ಕೆಲಸ ಮಾಡಿ 2024

ಹೌದು, ಸರ್ಕಾರದ ಸೌಲಭ್ಯ ಪಡೆಯಲು ಆಧಾರ್ ಸಿಡ್ ಮಾಡಿಸುವುದು ಕಡ್ಡಾಯವಾಗಿದೆ.

Crop insurance last date check ಬೆಳೆ ವಿಮೆ ಹೇಗೆ ನಿರ್ಧರಿಸುತ್ತಾರೆ?

ವಿಮಾ ಘಟಕದಲ್ಲಿ ಶೇ.75 ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡರೆ, ಅಥವಾ ಬಿತ್ತನೆಯಾದ ನಂತರ ಕಟಾವಿಗೆ ಮೊದಲು ಸಕಾಲಕ್ಕೆ ಮಳೆ ಬಾರದೆ ನಿರೀಕ್ಷಿತ ಇಳುವರಿಗಿಂತ ಶೇ. 50 ಕ್ಕಿಂತ ಹೆಚ್ಚು ಇಳುವರಿ  ನಷ್ಟ ಆದಲ್ಲಿ ಅಥವಾ ಅಕಾಲಿಕ ಮಳೆಯಿಂದ ಬೆಳೆ ಮುಳುಗಡೆ ಅಥವಾ ಕಟಾವಿನ ನಂತರ 14 ದಿನದೊಳಗೆ ಅಕಾಲಿಕ ಮಳೆಯಿಂದ ಬೆಳೆ ನಾಶವಾದರೆ ವಿಮಾ ಸಂಸ್ಥೆ ವೈಯಕ್ತಿಕವಾಗಿ ನಷ್ಟವನ್ನು ನಿರ್ಧರಿಸಿ ಪರಿಹಾರ ನೀಡಲು ಅವಕಾಶವಿರುತ್ತದೆ.

Crop insurance last date check ಬೆಳೆ ವಿಮೆ ಹಣ ಯಾವಾಗ ಜಮೆಯಾಗುತ್ತದೆ?

ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಸ್ಥಳ, ನಿರ್ಧಿಷ್ಠ, ಪ್ರಕೃತಿ ವಿಕೋಪಗಳಾದ ಆಲಿಕಲ್ಲು, ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಸ್ಫೋಟ ಹಾಗೂ ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡ ಸಂದರ್ಭದಲ್ಲಿ ಬೆಳೆ ನಷ್ಟ ಉಂಟಾದರೆ ಮಾತ್ರ ರೈತರಿಗೆ ಬೆಳೆ ವಿಮೆ ಹಣ ಜಮೆಯಾಗುತ್ತದೆ. ಪ್ರಾಕೃತಿಕ ವಿಕೋಪದಿಂದಾಗಿ  ಬೆಳೆ ಹಾನಿಯಾದಾಗ 72 ಗಂಟೆಯೊಳಗೆ ಆಯಾ ವಿಮಾ ಕಂಪನಿಗೆ ತಿಳಿಸಬೇಕು. ಆಗ ವಿಮಾ ಕಂಪನಿಯ ಸಿಬ್ಬಂದಿಗಳು ರೈತರ ಜಮೀನಿಗೆ ಬಂದು ಬೆಳೆ ಹಾನಿಯಾಗಿರುವ ಕುರಿತು ವರದಿ ಮಾಡುತ್ತಾರೆ. ಆಗ ರೈತರಿಗೆ ವಿಮೆ ಹಣ ಜಮೆಯಾಗಲಿದೆ.

Leave a Comment