Here three days rain : ಬಿಸಿಲಿನಿಂದ ತತ್ತರಿಸಿದ ಜನತೆಗೆ ಮತ್ತೆ ಮಳೆರಾಯ ತಂಪೆರೆಯಲಿದ್ದಾನೆ. ಹೌದು, ರಾಜ್ಯದಲ್ಲಿ ಮತ್ತೆ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಇದೇ ಮಾರ್ಚ್ 19 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ
Here three days rain ಮಾರ್ಚ್ 19 ರಿಂದ 21 ರವರೆಗೆ ದಕ್ಷಿಣ ಕನ್ನಡ, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ. ಈ ವೇಳೆ ಬಿರುಗಾಳಿಯೂ ಜಾಸ್ತಿ ಇರಲಿದೆ. ಉತ್ತರ ಕರ್ನಾಟಕದ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Here three days rain ಬೆಂಗಳೂರು ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಮಧ್ಯಾಹ್ನ ಅತವಾ ಸಂಜೆಯ ವೇಳೆಗೆ ಭಾಗಶ ಮೋಡ ಕವಿದ ವಾತಾವರಣ ಇರಲಿದೆ.
Here three days rain ನಿಮ್ಮ ಊರಿನ ಸುತ್ತಮುತ್ತ ಯಾವಾಗ ಮಳೆಯಾಗುತ್ತದೆ? ಎಂಬ ಮಾಹಿತಿಯನ್ನು ಸಹ ರೈತರು ಸಾರ್ಜನಿಕರು ಈಗ ಮನೆಯಲ್ಲೇ ಕುಳಿತು ಪಡೆಯಬಹುದು. ಹೌದು ಮಿತ್ರರೇ ಸಾರ್ಜಜನಿಕರಿಗೆ ರೈತರಿಗೆ ಅನುಕೂಲವಾಗಲೆಂದು ವರುಣಮಿತ್ರ ಸಹಾಯವಾಣಿಯನ್ನು ಆರಂಭಿಸಲಾಗಿದೆ. 92433 45433 ನಂಬರಿಗೆ ಕರೆ ಮಾಡಿದರೆ ಸಾಕು, ಅಂದಿನ ಹವಾಮಾನ ವರದಿ, ಮಳೆ ಯಾವಾಗ ಬರುತ್ತದೆ. ಗಾಳಿಯ ಯಾವ ದಿಕ್ಕಿನಿಂದ ಯಾವ ದಿಕ್ಕಿನ ಕಡೆಗೆ ಬೀಸುತ್ತಿದೆ. ಮಳೆಯ ಪ್ರಮಾಣ ಹೇಗಿರಲಿದೆ ಎಂಬ ಮಾಹಿತಿ ಸಿಗಲಿದೆ.
Here three days rain ಮೇಘದೂತ್ ಆ್ಯಪ್ ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
Here three days rain ಗುಡುಗು ಸಿಡಿಲಿನ ಆರ್ಭಟವಿದ್ದಾಗ ನಾಗರಿಕರು ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳು
ಸಿಡಿಲು ಮೊಬೈಲ್ ಆ್ಯಪ್ ಬಳಸುವ ಮೂಲಕ ನಾಗರಿಕರು ಸಿಡಿಲಿನ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆಯಬಹುದು. ಸಿಡಿಲಿನ ಸಂಭವನೀಯತೆ ಇದ್ದಲ್ಲಿ ಬಯಲಿನಲ್ಲಿ ಮಾಡಬೇಕಾದ ಕೆಲಸಗಳನ್ನು ಮುಂದೂಡಿ. ಮನೆಯಲ್ಲಿಯ ಸುರಕ್ಷಿತವಾಗಿ ಇರಲು ಸಹಾಯವಾಗುತ್ತದೆ.
ಸಿಡಲು ಬಡಿಯುವ ಮುನ್ಸೂಚನೆ ಇದ್ದಾಗಮನೆಯ ಕಿಟಕಿಯಿಂದ ದೂರ ಇರಬೇಕು. ಸಿಡಿಲು ಬಡಿಯುವ ಸಂದರ್ಭದಲ್ಲಿ ದೂರವಾಣಿ, ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಬಾರದು.
ಗೃಹಪಯೋಗಿ ಉಪಕರಣಗಳ ಪ್ಲಗ್ ಗಳನ್ನು ತೆಗೆದಿರಿಸಬೇಕು. ಸಿಡಿಲಿನ ಸಂದರ್ಭದಲ್ಲಿ ಮನೆಯ ಹೊರಗಡೆ ಸ್ಟಾನ ಮಾಡುವುದು ಸುರಕ್ಷಿತವಲ್ಲ. ಹೊರಾಂಗಣದಲ್ಲಿದ್ದವರು ಸುರಕ್ಷಿತ ಕಟ್ಟಡಗಳ ಒಳಗೆ ಹೋಗಬೇಕು. ಎತ್ತರದ ಪ್ರದೇಶಗಳಲ್ಲಿ ಸಿಡಿಲು ಬಡಿಯುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಸಾದ್ಯವಾದಷ್ಟು ತಗ್ಗು ಪ್ರದೇಶಗಳಿಗೆ ತೆರಳಬೇಕು.
ಮಳೆ ಬರುವುದಕ್ಕಿಂತ ಮೊದಲು ಸುರಕ್ಷಿತ ಸ್ಥಳಕ್ಕೆ ಹೋಗಿ ಆಸರೆ ಪಡೆದುಕೊಳ್ಳಬೇಕು. ಮಳೆ ಬಂದಾಗ ಹೊರಗಡೆ ಹೋಗಬಾರದು.