Pm kisan 22nd installment date ಪಿಎಂ ಕಿಸಾನ್ 22ನೇ ಕಂತಿನ ಹಣ ಯಾವಾಗ ಯಾವ ರೈತರಿಗೆ ಜಮೆಯಾಗಲಿದೆ ? ಈ ತಿಂಗಳ ಯಾವಾಗ ಜಮೆಯಾಗಲಿದೆ ಇಲ್ಲಿದೆ ಮಾಹಿತಿ
Pm kisan 22nd installment date : ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣ ಯಾವ ಯಾವ ರೈತರಿಗೆ ಜಮೆಯಾಗಲಿದೆ ಯಾವ ದಿನಾಂಕದಂದು ಜಮೆಯಾಗಲಿದೆ ಪಿಎಂ ಕಿಸಾನ್ ಯೋಜನೆಯ ಫಲಾನುಭವಗಳ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
Pm kisan 22nd installment date ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣ ಯಾವಾಗ ಜಮೆಯಾಗಲಿದೆ ?
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣ ಮುಂದಿನ ವಾರದಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂಬುದು ಮೂಲಗಳಿಂದ ತಿಳಿದು ಬಂದಿದೆ. ಹೌದು, ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ನವೆಂಬರ್ 19 ರಂದು ರೈತರ ಖಾತೆಗೆ ಜಮೆಯಾಗಿತ್ತು. ಪ್ರತಿ ನಾಲ್ಕು ತಿಂಗಳಿಗೊಮ್ಮೆ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆ. ಆ ಆಧಾರದ ಮೇಲೆ ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣ ಇದೇ ತಿಂಗಳು ಮುಂದಿನ ವಾರದಲ್ಲಿ ಅಂದರೆ ನವೆಂಬರ್ 19 ರೊಳಗಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ಹೇಳಲಾಗುತ್ತಿದೆ.
Pm kisan 22nd installment date ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣ ಯಾರಿಗೆ ಜಮೆಯಾಗಲಿದೆ ?
ಪಿಎಂ ಕಿಸಾನ್ ಯೋಜನೆಯ 22 ನೇ ಕಂತಿನ ಹಣ ಎಲ್ಲಾ ರೈತರಿಗೆ ಜಮೆಯಾಗುವುದಿಲ್ಲ. ಹೌದು, ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಜಮೆಯಾಗಬೇಕಾದರೆ ಇಕೆವೈಸಿ ಮಾಡಿಸಿರಬೇಕು. ಇಕೆವೈಸಿ ಮಾಡಿಸಿಲ್ಲವಾದರೆ ಮುಂದಿನ ಕಂತು ಹಣ ಜಮೆಯಾಗುವುದಿಲ್ಲ.
Pm kisan 22nd installment date ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ?
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ರಾಜ್ಯ ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಊರು ಆಯ್ಕೆ ಮಾಡಿಕಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಊರಿನಲ್ಲಿ ಯಾವ ಯಾವ ರೈತರು ಪಿಎಂ ಕಿಸಾನ್ ಯೋಜನೆಯ ಹಣ ಪಡೆಯುತ್ತಿದ್ದಾರೆ ಅವರ ಹೆಸರು ಕಾಣಿಸುತ್ತದೆ.

ಇಕೆವೈಸಿ ಮಾಡಿಸಿಕೊಳ್ಳಲು ಮನವಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಕೃಷಿ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ರೈತರು ತಮ್ಮ ಭೂ ದಾಖಲೆಗಳನ್ನು ಸರಿಪಡಿಸಿಕೊಳ್ಳುವುದು ಅಗತ್ಯವಾಗಿದೆ.
ಇದನ್ನೂ ಓದಿ : Mobile canteen subsidy get ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ: ಅರ್ಜಿ ಆಹ್ವಾನ 2026
ಈ ಕುರಿತು ಅವರು ಮಾಧ್ಯಮಕ್ಕೆ ಮಾತನಾಡಿ, ಈಗಾಗಲೇ ಇಕೆವೈಸಿ ಪ್ರಕ್ರಿಯೆ ಶುರುವಾಗಿದೆ. ಇನ್ನೂ ಯಾರು ಯಾರು ಇಕೆವೈಸಿ ಮಾಡಿಸಿಕೊಂಡಿಲ್ಲವೋ ಅವರು ಕೂಡಲೇ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಇಕೆವೈಸಿ ಮಾಡಿಸಿಕೊಳ್ಳಬೇಕು. ಪಹಣಿ, ಖಆತೆ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ವಿವರಗಳಲ್ಲಿ ಹೊಂದಾಣಿಕೆ ಇಲ್ಲದಿರುವುದರಿಂದ ಪಿಎಂ ಕಿಸಾನ್ ಸೇರಿದಂತೆ ಹಲವು ಯೋಜನೆಗಳ ಅನುದಾನ ಪಡೆಯಲು ರೈತರಿಗೆ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ರೈತರು ತಕ್ಷಣ ತಮ್ಮ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿ ಮಾಡಿಸಿಕೊಳ್ಳಬೇಕು. ಭೂ ದಾಖಲೆಗಳಲ್ಲಿ ದೋಷವಿದ್ದರೆ ಹತ್ತಿರದ ನಾಡ ಕಚೇರಿ, ಗ್ರಾಮ ಪಂಚಾಯತಿ ಅಥವಾ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಸರಿಪಡಿಸಿಕೊಳ್ಳಬೇಕು. ದಾಖಲೆಗಳು ಸರಿಯಾಗಿದ್ದರೆ ಮಾತ್ರ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯವನ್ನು ಸಮಯಕ್ಕೆ ಸರಿಯಾಗಿ ಲಭಿಸುತ್ತದೆ ಎಂದರು.





